September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಇವರ ಅಧ್ಯಕ್ಷತೆಯಲ್ಲಿ ಪ್ರಿಯದರ್ಶಿನಿ ಸಂಘದ ವಠಾರದಲ್ಲಿ ಸೆ. 23 ರಂದು ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.92.89 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.43 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸಂಘದ ಉಪಾಧ್ಯಕ್ಷ ಗಂಗಾಧರ್ ಮಿತ್ತಮಾರ್ ಸದಸ್ಯರಿಗೆ ಶೇ.11% ಡಿವಿಡೆಂಟ್ ಘೋಷಿಸಿದರು.

ಸಂಘವು ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ವ್ಯವಹಾರದೊಂದಿಗೆ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ. ಸಂಘವು ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಹಲವಾರು ಪ್ರಶಸ್ತಿಗಳು ದೊರಕಿವೆ. ಎಂದರು‌.

ವೇದಿಕೆಯಲ್ಲಿ ನಿರ್ದೇಶಕರಾದ ಉಮೇಶ್ ಎ.ಬಿ,ಬಿ.ಎಂ ಅಬ್ದುಲ್ ಹಮೀದ್, ಬಿ.ರಾಜಶೇಖರ ಅಜ್ರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ‌ರಾಮಚಂದ್ರ ಗೌಡ, ಶೈಲೇಶ್ ಕುಮಾರ್, ವಿ.ರಮೇಶ್ ಪೂಜಾರಿ, ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಶ್ರೀಮತಿ ಉಷಾ ಶರತ್, ಶ್ರೀಮತಿ ಜೆಸಿಂತಾ ಮೋನಿಸ್, ರಾಗ್ನೀಶ್,ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.

ರಶ್ಮಿತಾ, ಚೈತ್ರಾ ಪ್ರಾರ್ಥಿಸಿದರು. ನಿರ್ದೇಶಕ ಕೆ. ರಾಮಚಂದ್ರ ಗೌಡ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ವರದಿ ಮಂಡಿಸಿದರು. ನಿಡ್ಲೆ ಶಾಖೆಯ ಕಾರ್ಯನಿರ್ವಹಣಾಧಿಕಾರಿ ಜನೀಶ್ ಕಾರ್ಯಕ್ರಮ‌ ನಿರೂಪಿಸಿದರು. ಸಂಘದ ನೌಕರ ವೃಂದದವರಾದ ಯುವರಾಜ್, ಸುಷ್ಮಾ ಆರ್, ನಿತ್ಯನಿಧಿ ಸಂಗ್ರಾಹಕರಾದ ಪುನೀತ್, ಚರಣ್ ಕುಮಾರ್ ಪಿ, ಶಾಂತಿ ಮಾರ್ಟಿಸ್, ರಮಾನಂದ, ರಾಜೇಶ್ ಬಿ. ಸಹಕರಿಸಿದರು.

Related posts

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!