September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!