September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಮಕ್ಕಳು ಚಿಕ್ಕಂದಿನಲ್ಲಿ ತಮ್ಮ ಉಡುಪಿನ ಬಗ್ಗೆ ಜಾಗ್ರತೆ ಮತ್ತು ಕಾಳಜಿಯನ್ನು ವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇದು ಅವರಲ್ಲಿ ಶಿಸ್ತು ಮತ್ತು ಸಮಾನತೆಯ ಭಾವವನ್ನು ಬೆಳೆಸುತ್ತದೆ. ಅದಕ್ಕಾಗಿಯೇ ಬಿಳಿ ಮತ್ತು ನೀಲಿ ಬಣ್ಣದ ಸಮವಸ್ತ್ರವನ್ನು ನೀಡಿರುವುದು. ಒದಗಿಸಿದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು, ಒಳ್ಳೆಯ ಅಂಕಗಳನ್ನು ಪಡೆದುಕೊಂಡು, ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಶಾಲೆಗೆ ಕೃತಜ್ಞರಾಗಿದ್ದುಕೊಂಡು ಸಂಸ್ಥೆಯ ಉನ್ನತಿಗೆ ಸಹಕರಿಸಿ . ಹಾಗೂ ಪ್ರತಿವರ್ಷ ಶಾಲೆಯ ಅಭಿವೃದ್ಧಿಗೆ ಪೂರಕವಾಗಿರುವ ಬಹಳಷ್ಟು ಕೊಡುಗೆಗಳನ್ನು ಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಸದಸ್ಯರನ್ನು ಸದಾ ಸ್ಮರಿಸುತ್ತೇವೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ನುಡಿದರು.

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ಎಮ್.ಸಿ.ಎಫ್ ಸಂಸ್ಥೆ ಕೊಡ ಮಾಡಿದ 103 ವಿದ್ಯಾರ್ಥಿಗಳ ಸಮವಸ್ತ್ರವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್ ರವರು ವಿತರಿಸಿದರು.

ನಿಕಟ ಪೂರ್ವ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಮತ್ತು ಸ್ಥಳೀಯ ಪಂಚಾಯತ್ ಸದಸ್ಯರಾದ ಸಂತೋಷ್ ಮರ್ದೊಟ್ಟು ವೇದಿಕೆಯಲ್ಲಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ರೂಪ ಕುಮಾರಿಯವರು ಸ್ವಾಗತಿಸಿದ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಆಶಾ ರವರು ನಿರೂಪಿಸಿದರು. ಗೌರವ ಶಿಕ್ಷಕಿ ಮಾಲತಿ ವಂದಿಸಿದರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!