30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇದರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಹಿತ ಚಿಂತಕರ ಸಭೆಯು ಬಳಂಜ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಹಲವಾರು ಶಾಶ್ವತ ಯೋಜ‌ನೆಗಳನ್ನು ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.ವಿಶೇಷವಾಗಿ ಪ್ರತಿ ತಿಂಗಳಲ್ಲಿ ಯಾವುದಾದರೊಂದು ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ಕ್ರಮ‌ಕೈಗೊಳ್ಳಲಾಯಿತು.

ಅಮೃತ ಮಹೋತ್ಸವ ಕಾರ್ಯಕ್ರಮ 2024 ರ ಡಿಸೆಂಬರ್ ತಿಂಗಳ ಮೊದಲು ನಡೆಯಲಿದ್ದು ಮೊದಲಾಗಿ ಕೋರ್ ಕಮಿಟಿ ಮಾಡಲಾಯಿತು. ಹಾಗೂ ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ.ಕೆ ಅವರನ್ನು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಊರಿನ‌ ಗಣ್ಯರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಹೆಚ್.ಧರ್ಣಪ್ಪ ಪೂಜಾರಿ,ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್,ಪತ್ರಕರ್ತ ಮನೋಹರ್ ಬಳಂಜ,ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ,ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ವಿಲ್ಪ್ರೇಡ್ ಪಿಂಟೋ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕ ಮಲ್ಲಿಕಾರ್ಜುನ ಸ್ವಾಗತಿಸಿದರು. ಹಳೆ ವಿದ್ಯಾರ್ಥಿಗಳು, ಊರವರು ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಸಲಹೆ ನೀಡಿದರು.

Related posts

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!