23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ ಕಾಲನಿ ಸಮೀಪ ಅಂಗಡಿಗಳಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಾಗಿದೆ. ಇದರಿಂದಾಗಿ ದಿನನಿತ್ಯ ದಲಿತ ಕಾಲನಿಗಳಲ್ಲಿ ಗಲಾಟೆ ನಡೆಯುತ್ತದೆ ಎಂದು ದೂರಿದ ಅವರು ಇಲಾಖೆಗಳು ದಾಳಿ ನಡೆಸುವ ಮೊದಲೇ ಅಕ್ರಮ ದಂಧೆಕೋರರಿಗೆ ಮಾಹಿತಿ ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಪೂರಕವಾಗಿ ಮಾತನಾಡಿದ ದಲಿತ ಮುಖಂಡರುಗಳು ಅಕ್ರಮ ದಂಧೆಕೋರರ ಬಗ್ಗೆ ಧ್ವನಿ ಎತ್ತುವವರ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರು ದಲಿತ ಕಾಲನಿ ಸೇರಿದಂತೆ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಟ್ ಪೋಲಿಸರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ , ಇದರಿಂದಾಗಿ ಆಗಾಗ ಸಮಸ್ಯೆ ಉದ್ಭವಿಸುತ್ತದೆ. ಬೀಟ್ ಪೋಲಿಸರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಮುಖಂಡರಾದ ಸಂಜೀವ ಆರ್ , ರಮೇಶ್ ಆರ್ , ಶೇಖರ್ ಲಾಯಿಲ ಆರೋಪಿಸಿದರು. ದಲಿತ ಕಾಲನಿಗಳ ಸಮೀಪ ಅಪರಿಚಿತರು ಹೆಣ್ಣು ಮಕ್ಕಳನ್ನು ಚುಡಾಯಿಸುವ ಗಂಭೀರ ಸ್ವರೂಪದ ಸಮಸ್ಯೆಗಳ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಿಲ್ಲ ಎಂದು ಬಿ.ಕೆ ವಸಂತ ಆರೋಪಿಸಿದರು. ಈ ಬಗ್ಗೆ ಮಾತನಾಡಿದ ನಾಗೇಶ್ ಕದ್ರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರರವರು ಮುಂದಿನ ದಿನಗಳಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya
error: Content is protected !!