25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ ಕಾಲನಿ ಸಮೀಪ ಅಂಗಡಿಗಳಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಾಗಿದೆ. ಇದರಿಂದಾಗಿ ದಿನನಿತ್ಯ ದಲಿತ ಕಾಲನಿಗಳಲ್ಲಿ ಗಲಾಟೆ ನಡೆಯುತ್ತದೆ ಎಂದು ದೂರಿದ ಅವರು ಇಲಾಖೆಗಳು ದಾಳಿ ನಡೆಸುವ ಮೊದಲೇ ಅಕ್ರಮ ದಂಧೆಕೋರರಿಗೆ ಮಾಹಿತಿ ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಪೂರಕವಾಗಿ ಮಾತನಾಡಿದ ದಲಿತ ಮುಖಂಡರುಗಳು ಅಕ್ರಮ ದಂಧೆಕೋರರ ಬಗ್ಗೆ ಧ್ವನಿ ಎತ್ತುವವರ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರು ದಲಿತ ಕಾಲನಿ ಸೇರಿದಂತೆ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಟ್ ಪೋಲಿಸರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ , ಇದರಿಂದಾಗಿ ಆಗಾಗ ಸಮಸ್ಯೆ ಉದ್ಭವಿಸುತ್ತದೆ. ಬೀಟ್ ಪೋಲಿಸರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಮುಖಂಡರಾದ ಸಂಜೀವ ಆರ್ , ರಮೇಶ್ ಆರ್ , ಶೇಖರ್ ಲಾಯಿಲ ಆರೋಪಿಸಿದರು. ದಲಿತ ಕಾಲನಿಗಳ ಸಮೀಪ ಅಪರಿಚಿತರು ಹೆಣ್ಣು ಮಕ್ಕಳನ್ನು ಚುಡಾಯಿಸುವ ಗಂಭೀರ ಸ್ವರೂಪದ ಸಮಸ್ಯೆಗಳ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಿಲ್ಲ ಎಂದು ಬಿ.ಕೆ ವಸಂತ ಆರೋಪಿಸಿದರು. ಈ ಬಗ್ಗೆ ಮಾತನಾಡಿದ ನಾಗೇಶ್ ಕದ್ರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರರವರು ಮುಂದಿನ ದಿನಗಳಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

Related posts

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya
error: Content is protected !!