September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
error: Content is protected !!