25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್


ಬೆಳ್ತಂಗಡಿ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.24 ರಂದು ಕಾರ್ಕಳ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಭವನದಲ್ಲಿ ಸಹಕಾರಿಯ ಅಧ್ಯಕ್ಷರಾದ ನೇಮಿರಾಜ ಆರಿಗ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು.


ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಅವರು ಮಾತನಾಡಿ, ಸಂಘವು ವರದಿ ಸಾಲಿನಲ್ಲಿ ರೂ. 130 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ 17,92, 882 ಲಾಭಗಳಿಸಿದ್ದು ಸಂಘದ ಸದಸ್ಯರಿಗೆ ಶೇಕಡಾ 14 ಡಿವಿಡೆಂಟ್ ಘೋಷಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು ತಮ್ಮ ಸಭಾಭತ್ಯೆಯನ್ನು 16 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನಾಗಿ ನೀಡಿದರು ಹಾಗೂ ಮರಣ ಹೊಂದಿದ 3 ಸಾಲಗಾರರ ಸಾಲಗಳನ್ನು ಭರಿಸಿ ಆ ಕುಟುಂಬಗಳಿಗೆ ಸಾಲ ಋಣ ಮುಕ್ತ ಪತ್ರ ನೀಡಲಾಯಿತು.


ನಿರ್ದೇಶಕ ಶಶಿಕಿರಣ್ ಜೈನ್ ವರದಿ ವಾಚಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶಶಿಕಿರಣ್ ಜೈನ್ ಹಾಗೂ ನಿರ್ದೇಶಕರುಗಳಾದ ಪದ್ಮರಾಜ್ ಅತಿಕಾರಿ, ಮೊಹಮ್ಮದ್ ಗೌಸ್,ಶಮಂತ್ ಕುಮಾರ್ ಜೈನ್, ನಿರಂಜನ್ ಜೈನ್, ಎಸ್ ಪಿ ವರ್ಮ, ಪ್ರಶಾಂತ್ ಕುಮಾರ್, ಶ್ರೀಮತಿ ಪದ್ಮಲತಾ, ಶ್ರೀಮತಿ ಸುಜಾತ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್ ಉಪಸ್ಥಿತರಿದ್ದರು.

ಸಿಬ್ಬಂದಿ ಕು| ಅನುಷಾ ಇವರ ಪ್ರಾರ್ಥನೆ ಬಳಿಕ ಎಸ್.ಪಿ ವರ್ಮ ಸ್ವಾಗತಿಸಿದರು. ವಿಶುಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿ, ವಸೂಲಾತಿ ಅಧಿಕಾರಿ ರಾಕೇಶ್ ಕುಮಾರ್ ಧನ್ಯವಾದವಿತ್ತರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
error: Content is protected !!