September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಸಿನೆಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸುಭಾಷ್ ಅರ್ವ ಸ್ವೀಕರಿಸಿ,ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಕೆಂಡಸಂಪಿಗೆ ಧಾರಾವಾಹಿಗೆ ನಿರ್ದೇಶನ ಮಾಡಿ ಅನುಬಂಧ ಆವಾರ್ಡ್ ಪ್ರಶಸ್ತಿಯನ್ನು ಪಡೆದು ತನ್ನ ಸಾಧನೆ ಹಾಗೂ ಊರಿನ ಘನತೆಯನ್ನು ಇಡೀ ಕರ್ನಾಟಕಕ್ಕೆ ಪರಿಚಯ ಮಾಡಿದ್ದಾರೆ.

ಸುಭಾಷ್ ಅರುವರವರು 2008ರಲ್ಲಿ ತನ್ನ ವಿದ್ಯಾಭ್ಯಾಸವನ್ನು ಬೆಳ್ತಂಗಡಿಯಲ್ಲಿ ಪೂರ್ಣಗೊಳಿಸಿ ಕಲಾವಿದನಾಗಬೇಕೆಂದು ಕಲಾ ರಂಗವನ್ನು ಬೆಂಗಳೂರಿನಲ್ಲಿ ಸೇರುತ್ತಾರೆ.ಸತತ ಪರಿಶ್ರಮದ ಫಲವೇ ಈ ಕಲರ್ಸ್ ಕನ್ನಡ ಅನುಬಂಧ ಬೆಸ್ಟ್ ಡೈರೆಕ್ಟರ್ ಅವಾರ್ಡ್. ಇವರು ವಿನು ಬಳಂಜ ಅವರ ಗರಡಿಯಲ್ಲಿ ಪಲಗಿ ಸಹನಿರ್ದೇಶಕನಾಗಿ,ಸಹಾಯಕ ನಿರ್ದೇಶಕನಾಗಿ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ‌.ಇವರ ನಿರ್ದೇಶನದಲ್ಲಿ ಮೂಡಿಬಂದ ಎಲ್ಲಾ ಸೀರಿಯಲ್ ಗಳು ಸೂಪರ್ ಡೂಪರ್ ಹಿಟ್ ಅಗಿದೆ. ಅದರಲ್ಲಿ ಮಂಗಳ ಗೌರಿ, ರಂಗನಾಯಕಿ, ಗೀತಾ, ಪ್ರಸ್ತುತ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಸೀರಿಯಲ್ ಕೆಂಡಸಂಪಿಗೆ.

ಹಿರಿತೆರೆಯ ಬೇರ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿಯಾಗಿದ್ದು,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣರವರ ಸಹೋದರ.

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!