22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬಗಳಿಗೆ ವೈಲ್ಡ್ ಲೈಫ್ ಕನ್ಸರ್ವೇಶನ್ ಸೊಸೈಟಿ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಶ್ರೀ ರಾಮಚಂದ್ರ ಭಟ್, ಕುಕ್ಕುಜೆ ಕ್ಷೇತ್ರಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕೃಷಿ ಉಪಕರಣಗಳ ವಿತರಣಾ ಕಾರ್ಯಕ್ರಮ ಸೆ.25 ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಉಡುಪಿ ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ 96 ಫಲಾನುಭವಿಗಳಿಗೆ ಡಬ್ಲ್ಯೂ ಸಿ ಎಸ್ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಅಡಿಕೆಗೆ ಔಷಧ ಸಿಂಪಡಣೆ ಯಂತ್ರ 8 ಜನರಿಗೆ, ಅಡಿಕೆ ಮರ ಹತ್ತುವ ಯಂತ್ರ 4 ಜನರಿಗೆ, ಅಲ್ಯುಮಿನಿಯಂ ಏಣಿ 10 ಜನರಿಗೆ, ಕೈಗಾಡಿ 5 ಜನರಿಗೆ, ಸೋಲಾರ್ ಟರ್ಪಲ್ 5 ಜನರಿಗೆ, 5,000 ಅಡಿಕೆ ಸಸಿ, 200 ತೆಂಗಿನ ಸಸಿ, 200 ಕೊಕ್ಕೋ, 20 ಜನ ಫಲಾನುಭವಿಗಳಿಗೆ ತಲಾ 50 ರಂತೆ ಮಲ್ಲಿಗೆ ಗಿಡ, 25 ಜನರಿಗೆ ಡ್ರೈವಿಂಗ್ ತರಬೇತಿ ಮತ್ತು ಲೈಸೆನ್ಸ್ ಪತ್ರ, ಕುತ್ಲೂರು ಶ್ರೀದೇವಿ ಕೃಪಾದಲ್ಲಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ರಾಮಚಂದ್ರ ಭಟ್ ಕುಕ್ಕುಜೆ, ಯೋಜನೆಗಳ ಬಗ್ಗೆ ತಿಳಿಸಿ ಸ್ವಾಗತಿಸಿದರು. ಉಪಕರಣಗಳನ್ನು ವಿತರಿಸಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಡಬ್ಲ್ಯೂ ಸಿ ಎಸ್ ಸಂಸ್ಥೆಗೆ ಅಭಿನಂದಿಸಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿ ಕೃಷಿ ಉಪಕರಣಗಳನ್ನು ಸದುಪಯೋಗ ಮಾಡಿ ಕೃಷಿಯಲ್ಲಿ ಮುಂದುವರಿಯಬೇಕೆಂದು ತಿಳಿಸಿದರು.

ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ ಸಂಸ್ಥೆಯ ಕಾರ್ಯಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವೇಣೂರು ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ನಿರಂಜನ್, ಪ್ರಗತಿಪರ ಕೃಷಿಕರಾದ ಮುನಿರಾಜ್ ಜೈನ್, ಅಭಿಜಿತ್, ಸಂಸ್ಥೆಯ ರವಿ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಡಬ್ಲ್ಯೂ.ಸಿ.ಎಸ್ ಸಂಸ್ಥೆಯನ್ನು ಫಲನುಭವಿಗಳಾದ ದೇವಪ್ಪ ಮಲೆಕುಡಿಯ ನೂರಾಳ್ ಬೆಟ್ಟು, ಶ್ರೀಮತಿ ಅಮಿತ ನಾಯ್ಕ ಕುತ್ಲೂರು ಅಭಿನಂದಿಸಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಧರ್ಣಪ್ಪ ಧನ್ಯವಾದವಿತ್ತರು.

Related posts

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!