25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya
error: Content is protected !!