23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
error: Content is protected !!