September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
error: Content is protected !!