July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್


ಪತ್ರಿಕಾಗೋಷ್ಠಿ
ಬೆಳ್ತಂಗಡಿ: ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಬಹಳ ನೀರಿಕ್ಷೆಯಲ್ಲಿ ಜನರು ಈ ಸರಕಾರವನ್ನು ಆಡಳಿತಕ್ಕೆ ತಂದಿದ್ದರು. ಆದರೆ ಅತ್ಯಂತ ಸಣ್ಣ ಅವಧಿಯಲ್ಲಿ ಜನತೆಯ ವಿಶ್ವಾಸವನ್ನು ಈ ಸರಕಾರ ಕಳೆದುಕೊಂಡು, ನೀಡಿದ ಭರವಸೆ ನುಚ್ಚುನೂರಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲ ಎಂದು ಹೇಳುವ ಸರಕಾರ ಇವತ್ತು ತನ್ನ ರಾಜಕೀಯದ ಲಾಭದ ಗ್ಯಾರಂಟಿ ಯೋಜನೆಗಳಿಗೆ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು.


ಅವರು ಸೆ.26 ರಂದು ಶಾಸಕರ ಶ್ರಮಿಕ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸುಮಾರು ಒಂದು ಸಾವಿರ ಮದ್ಯದಂಗಡಿಗಳನ್ನು ರಾಜ್ಯದ ಉದ್ದಗಲಕ್ಕೆ ಪಂಚಾಯತು ಮಟ್ಟದಲ್ಲಿ ತೆರೆಯುವುದರ ದಿಕ್ಕಿನಲ್ಲಿ ಸರಕಾರ ಹೆಜ್ಜೆ ಇಟ್ಟಿದೆ. ಕಾವೇರಿಯ ನೀರು ವ್ಯವಹರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿ, ರಾಜ್ಯದ ಜನರಿಗೆ ಕುಡಿಯುವ ನೀರು ಹಾಗೂ ರೈತರ ಬೆಳೆಗೆ ನೀರು ಕೊಡಲು ಸಾಧ್ಯವಿಲ್ಲದ ಎಂಬ ಪರಿಸ್ಥಿಯನ್ನು ಸರಕಾರ ನಿರ್ಮಿಸಿದೆ, ಇವತ್ತು ನೀರಿನ ಬದಲಿಗೆ ಮದ್ಯವನ್ನು ಮನೆ, ಮನೆಗೆ ಹಂಚುವಂತಹ, ದಿಕ್ಕಿನಲ್ಲಿ ಸರಕಾರ ಹೆಜ್ಜೆ ಇರಿಸಿದೆ. ಮಹಾತ್ಮಗಾಂಧಿಜೀಯವರ ಹೆಸರಿನಲ್ಲಿ ದಿನ ತೆಗೆಯುತ್ತಿರುವ ಕಾಂಗ್ರೆಸ್‌ಗೆ ಅವ ಹೆಸರು ಮಾತ್ರ ಬೇಕೆ ಹೊರತು, ಅವರ ವಿಚಾರವಾಗಲಿ, ಜನಸಾಮಾನ್ಯರ ಬಗ್ಗೆ ಕಾಳಜಿಯಾಗಲಿ ಇಲ್ಲ ಎಂಬುದು ಇವರ ಮದ್ಯದಂಗಡಿಯ ವ್ಯವಹಾರ ತೋರಿಸುತ್ತಾ ಇದೆ ಎಂದು ಆರೋಪಿಸಿದರು.


ಐದು ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ತಪ್ಪು ದಾರಿಗೆ ಕೊಂಡೋಗಿ ಈಗ ಆರ್ಥಿಕವಾಗಿ, ಈ ಹೊರೆಯನ್ನು ಭರಿಸಲು ಆಗದೆ ಒಂದು ಕಡೆಯಿಂದ ಅಭಿವೃದ್ಧಿ ಸ್ಥಗಿತಕೊಂಡಿದ್ದರೆ, ಇನ್ನೊಂದು ಕಡೆಯಿಂದ ಗ್ಯಾರಂಟಿ ಯೋಜನೆಗಳಿಗೆ ಹಣದ ಹೊಂದಾಣಿಕೆಗೆ ಶರಾಬಿನ ವ್ಯವಹಾರನ್ನು ಪ್ರಾರಂಭ ಮಾಡಿರುವಂತದು ಅವರ ನೈತಿಕ ದಿವಾಳಿತನಕ್ಕೆ ಇದು ಸಾಕ್ಷಿಯಾಗಿದೆ ಎಂದರು.


ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಬರಪರಿಸ್ಥಿತಿ ಇದೆ. ವಿದ್ಯುತ್ ಉತ್ಪಾದನೆಯ ಕೊರತೆ ಇದೆ. ಈ ಯಾವುದೇ ಜನರ ಸಮಸ್ಯೆಗಳಿಗೆ ಸ್ಪಂದನೆ ಕೊಡುವಂತಹ ದಿಕ್ಕಿನಲ್ಲಿ ಸರಕಾರ ಯಾವುದೇ ಪೂರ್ವ ತಯಾರಿ ಮಾಡದೇ, ಈಗ ಎಷ್ಟು ಉಪಮುಖ್ಯಂತ್ರಿಗಳು ಬೇಕೆಂಬ ಚರ್ಚೆ ನಡೆಯುತ್ತಿದೆ. ಒಂದು ವರದಿ ಪ್ರಕಾರ ಮೂರರಿಂದ ಆರರತನಕ ಉಪಮುಖ್ಯಮಂತ್ರಿ ಮಾಡುವ ದಿಕ್ಕಿನಲ್ಲಿ ಅವರದೇ ಪಕ್ಷದ ಶಾಸಕರುಗಳು ಮಾತನಾಡುವುದು, ನೋಡುವಾಗ ಪಕ್ಷದ ಹಾಗೂ ಸರಕಾರದ ಒಳಗೆ ಅಧಿಕಾರದ ಕಿತ್ತಾಟ ಎಷ್ಟುರ ಮಟ್ಟಿಗೆ ಇದೆ ಎಂಬುದನ್ನು ಕಾಂಗ್ರಸ್‌ನ ಈ ನಡವಳಿಕೆ ತೋರಿಸುತ್ತಿದೆ ಎಂದರು.


ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರ ಜಗತ್ತು ಮೆಚ್ಚುವಂತಹ ಸಾಧನೆಗಳನ್ನು ಮಾಡುತ್ತಾ ಇದ್ದರೆ, ಒಂದು ಕಡೆಯಿಂದ ವಿಶ್ವವೇ ಮೆಚ್ಚುವಂತಹ ಚಂದ್ರಯಾನ, ಇನ್ನೊಂದು ಕಡೆ ಜಿ.20ಯ ಸಫಲತೆಯ ಮೂಲಕ ಇಡೀ ಜಗತ್ತಿಗೆ ನೇತೃತ್ವ ಕೊಡಬಲ್ಲಂತಹ ಸಾಮರ್ಥವನ್ನು ತೋರಿಸುತ್ತಾ, ಭಾರತದ ಅಭಿವೃದ್ಧಿ, ಸಾಂಸ್ಕೃತಿಕ ವೈಭವನ್ನು ಜಗತ್ತಿಗೆ ಪರಿಚಯಿಸಿದರೆ, ಕರ್ನಾಟಕ ಸರಕಾರ ಸಂಪೂರ್ಣ ವಿಫಲವಾಗಿ ಮದ್ಯಮಾರಾಟ ಮಾಡುವ ದಯನೀಯ ಸ್ಥಿತಿಗೆ ಬಂದಿರುವಂತದು ಜನಸಾಮಾನ್ಯರಲ್ಲಿ ಈ ಸರಕಾರದ ಬಗ್ಗೆ ಭ್ರಮನಿರಸ ತಂದಿದೆ.
ಜನ ಇದೆಲ್ಲದಕ್ಕೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸರಕಾರದ ವಿರುದ್ಧ ಮತ್ತು ಕೇಂದ್ರ ಸರಕಾರದ ಪರವಾಗಿ ತಮ್ಮ ಮತದಾನ ಮೂಡುವುದರ ಉತ್ತರ ನೀಡಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಉಪಸ್ಥಿತರಿದ್ದರು.

Related posts

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!