25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

Related posts

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!