24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya
error: Content is protected !!