September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!