July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

ಬೆಲ್ತಂಗಡಿ: ತುಳುಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ ಚಿತ್ರ “ಪುರ್ಸ ಕಟ್ಟುನ: ಇನಿ- ಕೋಡೆ – ಎಲ್ಲೆ” ಇದರ ಬಿಡುಗಡೆ ಸಮಾರಂಭ ಅ 2 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ವಿಕಿಮೀಡಿಯ ಪೌಂಡೇಶನ್, CIS-A2K, ಕರಾವಳಿ ವಿಕಿಮೀಡಿಯನ್ಸ್‌ ಯೂಸರ್ ಗ್ರೂಪ್ ಇವರ ಸಹಕಾರದಿಂದ ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿ ತಯಾರಿಸಿರುವ ಡಾ ಸುಂದರ ಕೇನಾಜೆ ನಿರ್ದೇಶನ ಮಾಡಿರುವ ಈ ಸಾಕ್ಷ್ಯಚಿತ್ರವು ಬೆಳ್ತಂಗಡಿ ಭಾಗದಲ್ಲಿ ಪ್ರಚಲಿತವಿರುವ ಪುರ್ಸ ಕಟ್ಟುನ ಕುಣಿತ ಹಾಗೂ ಸುಳ್ಯ ಪರಿಸರದಲ್ಲಿರುವ ಸಿದ್ಧವೇಷ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ. ತುಳು ಸಂಶೋಧನಾತ್ಮಕ ನೆಲೆಯಲ್ಲಿ ತಯಾರಾಗಿರುವ ಈ ಸಾಕ್ಷಚಿತ್ರ ಪುರ್ಸ ಕುಣಿತದ ಹಿನ್ನಲೆ, ಕುಣಿತದ ಸ್ವರೂಪ ಹಾಗೂ ವಿದ್ವಾಂಸರ ವಿಶ್ಲೇಷಣೆ ಹಾಗೂ ಇಂದಿನ ಸ್ಥಿತಿಗತಿಗಳನ್ನು ಒಳಗೊಂಡದ್ದಾಗಿದ್ದು ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ ಚಿತ್ರವಾಗಿ ಬಿಡುಗಡೆಗೊಳ್ಳಲಿದೆ. ಬೆಳ್ತಂಗಡಿಯ ಪರಿಸರ, ಪುರ್ನ ಕಟ್ಟುನ, ಕಂದ್ರಪ್ಪಾಡಿ ಪುರುಷ ದೈವ, ಗೌಡ ಸಮುದಾಯ ಮತ್ತು ಮಲೆಕುಡಿಯ ಸಮುದಾಯದ ಸಿದ್ಧವೇಷ ಹಾಗೂ ಮರಾಠಿ ಜನಾಂಗ ಬಾಲೆಸಾಂತು ಕುಣಿತವನ್ನು ತೌಲನಿಕವಾಗಿ ಈ ಸಾಕ್ಷ್ಯಚಿತ್ರದಲ್ಲಿ ಬಳಸಲಾಗಿದೆ.

ಮೈಸೂರಿನ ಕನ್ನಡಿ ಕ್ರಿಯೇಷನ್ ತಂಡ ಬೆಳ್ತಂಗಡಿ ಪರಿಸರದಲ್ಲಿ ಒಂದು ವಾರಗಳ ಕಾಲ ಚಿತ್ರೀಕರಣ ನಡೆಸಿ ಈ ಸಾಕ್ಷ್ಯಚಿತ್ರವನ್ನು ತಯಾರಿಸಿರುತ್ತಾರೆ, ಕರಾವಳಿಯ ಹಿರಿಯ ವಿದ್ವಾಂಸರು, ಕುಣಿತದ ಕಲಾವಿದರು ಹಾಗೂ ವಿಭಿನ್ನ ಕುಣಿತಗಳನ್ನು ಒಳಗೊಂಡ ಈ ಸಾಕ್ಷ ಚಿತ್ರ ಪುರ್ಸ ಕಟ್ಟುವುದರದ ಬಗ್ಗೆ ಅನೇಕ ಹೊಸ ವಿಚಾರಗಳನ್ನು ಪ್ರಸ್ತುತಪಡಿಸುತ್ತಿದೆ. ಗುರು ಪ್ರಸಾದ್ ಸ್ವಾಮಿ ಹಿರೇಮಠ ಬೆಂಗಳೂರು ಮತ್ತು ತಂಡದ ಛಾಯಾಗ್ರಹಣ, ರಂಜಿತ್ ಸೇತು ಮೈಸೂರುರವರ ಸಂಕಲನ, ದೀಪು ನಾಯರ್ ಮೈಸೂರುರವರ ಸಂಗೀತ ಹಾಗೂ ಡಾ.ಗಿರೀಶರವರ ಇಂಗ್ಲೀಷ್ ಉಪಶೀರ್ಷಿಕ, ದಿನೇಶ್ ಕುಕ್ಕುಜಡ್ಕರ ರೇಖಾಚಿತ್ರಗಳನ್ನು ಈ ಸಾಕ್ಷ ಚಿತ್ರ ಒಳಗೊಂಡಿದೆ.

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಮತ್ತು ಸಿಐಎಸ್ ಎ2ಕೆ ಬೆಂಗಳೂರು ಈ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಈ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳು ಅಧ್ಯಕ್ಷರಾದ ಪಿ. ಕುಶಾಲಪ್ಪ ಗೌಡ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕ್ಷ್ಯಚಿತ್ರ ಬಿಡುಗಡೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಂಬಯಿ ವಿಶ್ವವಿದ್ಯಾನಿಲಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತ ಕುಮಾರ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಎಸ್‌.ಡಿ.ಎಂ. ಕಾಲೇಜು ಉಜಿರೆ ಇಲ್ಲಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ದಿವಾಕರ ಕೊಕ್ಕಡ ಇವರು ಭಾಗವಹಿಸಲಿದ್ದಾರೆ. ಬಿಡುಗಡೆಗೊಂಡ ಬಳಿಕ ಈ ಸಾಕ್ಷ್ಯಚಿತ್ರ ವಿಕಿಕಾಮನ್ಸ್ ಮತ್ತು ಯೂಟ್ಯೂಬ್ ಗಳಲ್ಲಿ ಲಭ್ಯವಾಗಲಿದೆ.

Related posts

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
error: Content is protected !!