23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

ಬೆಲ್ತಂಗಡಿ: ತುಳುಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ ಚಿತ್ರ “ಪುರ್ಸ ಕಟ್ಟುನ: ಇನಿ- ಕೋಡೆ – ಎಲ್ಲೆ” ಇದರ ಬಿಡುಗಡೆ ಸಮಾರಂಭ ಅ 2 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ವಿಕಿಮೀಡಿಯ ಪೌಂಡೇಶನ್, CIS-A2K, ಕರಾವಳಿ ವಿಕಿಮೀಡಿಯನ್ಸ್‌ ಯೂಸರ್ ಗ್ರೂಪ್ ಇವರ ಸಹಕಾರದಿಂದ ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿ ತಯಾರಿಸಿರುವ ಡಾ ಸುಂದರ ಕೇನಾಜೆ ನಿರ್ದೇಶನ ಮಾಡಿರುವ ಈ ಸಾಕ್ಷ್ಯಚಿತ್ರವು ಬೆಳ್ತಂಗಡಿ ಭಾಗದಲ್ಲಿ ಪ್ರಚಲಿತವಿರುವ ಪುರ್ಸ ಕಟ್ಟುನ ಕುಣಿತ ಹಾಗೂ ಸುಳ್ಯ ಪರಿಸರದಲ್ಲಿರುವ ಸಿದ್ಧವೇಷ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ. ತುಳು ಸಂಶೋಧನಾತ್ಮಕ ನೆಲೆಯಲ್ಲಿ ತಯಾರಾಗಿರುವ ಈ ಸಾಕ್ಷಚಿತ್ರ ಪುರ್ಸ ಕುಣಿತದ ಹಿನ್ನಲೆ, ಕುಣಿತದ ಸ್ವರೂಪ ಹಾಗೂ ವಿದ್ವಾಂಸರ ವಿಶ್ಲೇಷಣೆ ಹಾಗೂ ಇಂದಿನ ಸ್ಥಿತಿಗತಿಗಳನ್ನು ಒಳಗೊಂಡದ್ದಾಗಿದ್ದು ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ ಚಿತ್ರವಾಗಿ ಬಿಡುಗಡೆಗೊಳ್ಳಲಿದೆ. ಬೆಳ್ತಂಗಡಿಯ ಪರಿಸರ, ಪುರ್ನ ಕಟ್ಟುನ, ಕಂದ್ರಪ್ಪಾಡಿ ಪುರುಷ ದೈವ, ಗೌಡ ಸಮುದಾಯ ಮತ್ತು ಮಲೆಕುಡಿಯ ಸಮುದಾಯದ ಸಿದ್ಧವೇಷ ಹಾಗೂ ಮರಾಠಿ ಜನಾಂಗ ಬಾಲೆಸಾಂತು ಕುಣಿತವನ್ನು ತೌಲನಿಕವಾಗಿ ಈ ಸಾಕ್ಷ್ಯಚಿತ್ರದಲ್ಲಿ ಬಳಸಲಾಗಿದೆ.

ಮೈಸೂರಿನ ಕನ್ನಡಿ ಕ್ರಿಯೇಷನ್ ತಂಡ ಬೆಳ್ತಂಗಡಿ ಪರಿಸರದಲ್ಲಿ ಒಂದು ವಾರಗಳ ಕಾಲ ಚಿತ್ರೀಕರಣ ನಡೆಸಿ ಈ ಸಾಕ್ಷ್ಯಚಿತ್ರವನ್ನು ತಯಾರಿಸಿರುತ್ತಾರೆ, ಕರಾವಳಿಯ ಹಿರಿಯ ವಿದ್ವಾಂಸರು, ಕುಣಿತದ ಕಲಾವಿದರು ಹಾಗೂ ವಿಭಿನ್ನ ಕುಣಿತಗಳನ್ನು ಒಳಗೊಂಡ ಈ ಸಾಕ್ಷ ಚಿತ್ರ ಪುರ್ಸ ಕಟ್ಟುವುದರದ ಬಗ್ಗೆ ಅನೇಕ ಹೊಸ ವಿಚಾರಗಳನ್ನು ಪ್ರಸ್ತುತಪಡಿಸುತ್ತಿದೆ. ಗುರು ಪ್ರಸಾದ್ ಸ್ವಾಮಿ ಹಿರೇಮಠ ಬೆಂಗಳೂರು ಮತ್ತು ತಂಡದ ಛಾಯಾಗ್ರಹಣ, ರಂಜಿತ್ ಸೇತು ಮೈಸೂರುರವರ ಸಂಕಲನ, ದೀಪು ನಾಯರ್ ಮೈಸೂರುರವರ ಸಂಗೀತ ಹಾಗೂ ಡಾ.ಗಿರೀಶರವರ ಇಂಗ್ಲೀಷ್ ಉಪಶೀರ್ಷಿಕ, ದಿನೇಶ್ ಕುಕ್ಕುಜಡ್ಕರ ರೇಖಾಚಿತ್ರಗಳನ್ನು ಈ ಸಾಕ್ಷ ಚಿತ್ರ ಒಳಗೊಂಡಿದೆ.

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಮತ್ತು ಸಿಐಎಸ್ ಎ2ಕೆ ಬೆಂಗಳೂರು ಈ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಈ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳು ಅಧ್ಯಕ್ಷರಾದ ಪಿ. ಕುಶಾಲಪ್ಪ ಗೌಡ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕ್ಷ್ಯಚಿತ್ರ ಬಿಡುಗಡೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಂಬಯಿ ವಿಶ್ವವಿದ್ಯಾನಿಲಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತ ಕುಮಾರ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಎಸ್‌.ಡಿ.ಎಂ. ಕಾಲೇಜು ಉಜಿರೆ ಇಲ್ಲಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ದಿವಾಕರ ಕೊಕ್ಕಡ ಇವರು ಭಾಗವಹಿಸಲಿದ್ದಾರೆ. ಬಿಡುಗಡೆಗೊಂಡ ಬಳಿಕ ಈ ಸಾಕ್ಷ್ಯಚಿತ್ರ ವಿಕಿಕಾಮನ್ಸ್ ಮತ್ತು ಯೂಟ್ಯೂಬ್ ಗಳಲ್ಲಿ ಲಭ್ಯವಾಗಲಿದೆ.

Related posts

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya
error: Content is protected !!