39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಸಿನೆಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸುಭಾಷ್ ಅರ್ವ ಸ್ವೀಕರಿಸಿ,ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಕೆಂಡಸಂಪಿಗೆ ಧಾರಾವಾಹಿಗೆ ನಿರ್ದೇಶನ ಮಾಡಿ ಅನುಬಂಧ ಆವಾರ್ಡ್ ಪ್ರಶಸ್ತಿಯನ್ನು ಪಡೆದು ತನ್ನ ಸಾಧನೆ ಹಾಗೂ ಊರಿನ ಘನತೆಯನ್ನು ಇಡೀ ಕರ್ನಾಟಕಕ್ಕೆ ಪರಿಚಯ ಮಾಡಿದ್ದಾರೆ.

ಸುಭಾಷ್ ಅರುವರವರು 2008ರಲ್ಲಿ ತನ್ನ ವಿದ್ಯಾಭ್ಯಾಸವನ್ನು ಬೆಳ್ತಂಗಡಿಯಲ್ಲಿ ಪೂರ್ಣಗೊಳಿಸಿ ಕಲಾವಿದನಾಗಬೇಕೆಂದು ಕಲಾ ರಂಗವನ್ನು ಬೆಂಗಳೂರಿನಲ್ಲಿ ಸೇರುತ್ತಾರೆ.ಸತತ ಪರಿಶ್ರಮದ ಫಲವೇ ಈ ಕಲರ್ಸ್ ಕನ್ನಡ ಅನುಬಂಧ ಬೆಸ್ಟ್ ಡೈರೆಕ್ಟರ್ ಅವಾರ್ಡ್. ಇವರು ವಿನು ಬಳಂಜ ಅವರ ಗರಡಿಯಲ್ಲಿ ಪಲಗಿ ಸಹನಿರ್ದೇಶಕನಾಗಿ,ಸಹಾಯಕ ನಿರ್ದೇಶಕನಾಗಿ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ‌.ಇವರ ನಿರ್ದೇಶನದಲ್ಲಿ ಮೂಡಿಬಂದ ಎಲ್ಲಾ ಸೀರಿಯಲ್ ಗಳು ಸೂಪರ್ ಡೂಪರ್ ಹಿಟ್ ಅಗಿದೆ. ಅದರಲ್ಲಿ ಮಂಗಳ ಗೌರಿ, ರಂಗನಾಯಕಿ, ಗೀತಾ, ಪ್ರಸ್ತುತ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಸೀರಿಯಲ್ ಕೆಂಡಸಂಪಿಗೆ.

ಹಿರಿತೆರೆಯ ಬೇರ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿಯಾಗಿದ್ದು,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣರವರ ಸಹೋದರ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya
error: Content is protected !!