24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಬೆಳ್ತಂಗಡಿ: ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಉಸ್ಮಾನ್ ಗರ್ಡಾಡಿ ಇವರು 2021 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಸಿಬ್ಬಂದಿಯಾಗಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಸ್ಮಾನ್ ಗರ್ಡಾಡಿ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.

ಸೆ.22 ರಂದು ಬೆಂಗಳೂರಿನ ಆರ್.ಎ ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಬನ್ನೇರುಘಟ್ಟದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಉಸ್ಮಾನ್ ಅವರು ಗರ್ಡಾಡಿ ಗ್ರಾಮದ ನಿವಾಸಿಯಾಗಿದ್ದು ಗರ್ಡಾಡಿ,ಪಡಂಗಡಿಯಲ್ಲಿ ವಿದ್ಯಾಭ್ಯಾಸವನ್ನು ಮಾಡಿ ನಂತರ ವೇಣೂರಿನಲ್ಲಿ ಪಿಯುಸಿ ಪೂರ್ಣಗೊಳಿಸಿದರು.2005 ರಲ್ಲಿ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಪ್ರಾಥಮಿಕ ತರಭೇತಿಯನ್ನು ಶಿವಮೊಗ್ಗದಲ್ಲಿ ಮಾಡಿದ್ದಾರೆ. 17 ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ಸೇವೆಸಲ್ಲಿಸಿ ಕಳೆದ ವರ್ಷ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದಾರೆ.

Related posts

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!