24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya
error: Content is protected !!