September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಕೋಳಿ ಸಾಕಾಣಿಕೆ ರೈತರಿಗೆ ಕಂಪನಿಗಳು ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯ: ಪ್ರಕಾಶ್ ಗೌಡ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya
error: Content is protected !!