38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ ಕಾರ್ಯಕ್ರಮ ಸೆ.26 ರಂದು ಶ್ರಮಿಕ ಶಾಸಕರ ಕಾರ್ಯಾಲಯದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ಆಯ್ದ ಯುವಕ-ಯುವತಿ ಮಂಡಲಗಳಾದ ಜೈರಾಮ್ ಗೆಳೆಯರ ಬಳಗ ಬಂದಾರು. ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಓಡಿಲ್ನಾಳ, ಅರುಣೋದಯ ಯುವಕ ಮಂಡಲ ಮರೋಡಿ, ಕೀರ್ತನಾ ಕಲಾ ತಂಡ ಮುಂಡಾಜೆ, ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಪ್ರಗತಿ ಮಹಿಳಾ ಮಂಡಲ ಉಜಿರೆ ಇವರಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳೆಂಜ, ಯುವಜನ ಒಕ್ಕೂಟದ ಜಿಲ್ಲಾ ನಿರ್ದೇಶಕ ಚಿದಾನಂದ ಇಡ್ಯ, ಮಿತ್ತಬಾಗಿಲು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಬಂದಾರು ಗ್ರಾ.ಪಂ ಮಾಜಿ ಅಧ್ಯಕ್ಷ ಉದಯ ಬಿ.ಕೆ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಸಂಯೋಜಕ ಶಾಂತಪ್ಪ ಕಲ್ಮಂಜ ಸ್ವಾಗತಿಸಿದರು. ಸ್ಮಿತೇಶ್ ಎಸ್. ಬಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya
error: Content is protected !!