25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ ಕಾರ್ಯಕ್ರಮ ಸೆ.26 ರಂದು ಶ್ರಮಿಕ ಶಾಸಕರ ಕಾರ್ಯಾಲಯದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ಆಯ್ದ ಯುವಕ-ಯುವತಿ ಮಂಡಲಗಳಾದ ಜೈರಾಮ್ ಗೆಳೆಯರ ಬಳಗ ಬಂದಾರು. ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಓಡಿಲ್ನಾಳ, ಅರುಣೋದಯ ಯುವಕ ಮಂಡಲ ಮರೋಡಿ, ಕೀರ್ತನಾ ಕಲಾ ತಂಡ ಮುಂಡಾಜೆ, ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಪ್ರಗತಿ ಮಹಿಳಾ ಮಂಡಲ ಉಜಿರೆ ಇವರಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳೆಂಜ, ಯುವಜನ ಒಕ್ಕೂಟದ ಜಿಲ್ಲಾ ನಿರ್ದೇಶಕ ಚಿದಾನಂದ ಇಡ್ಯ, ಮಿತ್ತಬಾಗಿಲು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಬಂದಾರು ಗ್ರಾ.ಪಂ ಮಾಜಿ ಅಧ್ಯಕ್ಷ ಉದಯ ಬಿ.ಕೆ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಸಂಯೋಜಕ ಶಾಂತಪ್ಪ ಕಲ್ಮಂಜ ಸ್ವಾಗತಿಸಿದರು. ಸ್ಮಿತೇಶ್ ಎಸ್. ಬಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!