23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ ಕಾರ್ಯಕ್ರಮ ಸೆ.26 ರಂದು ಶ್ರಮಿಕ ಶಾಸಕರ ಕಾರ್ಯಾಲಯದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ಆಯ್ದ ಯುವಕ-ಯುವತಿ ಮಂಡಲಗಳಾದ ಜೈರಾಮ್ ಗೆಳೆಯರ ಬಳಗ ಬಂದಾರು. ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಓಡಿಲ್ನಾಳ, ಅರುಣೋದಯ ಯುವಕ ಮಂಡಲ ಮರೋಡಿ, ಕೀರ್ತನಾ ಕಲಾ ತಂಡ ಮುಂಡಾಜೆ, ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಪ್ರಗತಿ ಮಹಿಳಾ ಮಂಡಲ ಉಜಿರೆ ಇವರಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳೆಂಜ, ಯುವಜನ ಒಕ್ಕೂಟದ ಜಿಲ್ಲಾ ನಿರ್ದೇಶಕ ಚಿದಾನಂದ ಇಡ್ಯ, ಮಿತ್ತಬಾಗಿಲು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಬಂದಾರು ಗ್ರಾ.ಪಂ ಮಾಜಿ ಅಧ್ಯಕ್ಷ ಉದಯ ಬಿ.ಕೆ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಸಂಯೋಜಕ ಶಾಂತಪ್ಪ ಕಲ್ಮಂಜ ಸ್ವಾಗತಿಸಿದರು. ಸ್ಮಿತೇಶ್ ಎಸ್. ಬಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!