26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಕಾರ್ಯಾಗಾರ, ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಇದರ ಸಹಭಾಗೀತ್ವದಲ್ಲಿ ಜೇನು ಕೃಷಿ, ಇಲಾಖೆಯ ವಿವಿಧ ಯೋಜನೆಗಳು, ಬೆಳೆ ವಿಮೆ ಮತ್ತು ಪೌಷ್ಟಿಕ ತೋಟದ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ಸೆ.26 ರಂದು ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಜರಗಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಎ.ಕೆ. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಪ್ರತಿಮಾ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ರಾಜ್ಯ ಮಟ್ಟದ ಜೇನು ಕೃಷಿ ತರಬೇತಿದಾರ ರಾಧಾಕೃಷ್ಣ ಕೋಡಿ, ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಗ್ರಾಮ ಪಂಚಾಯತ್ ಸದಸ್ಯರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛತಾ ಹೀ ಸೇವಾ ಆಂದೋಲನದ ಮೂಲಕ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ನಾಗರೀಕರು, ವರ್ತಕರು ಸಹಕಾರ ನೀಡಿ ಪ್ರೋತ್ಸಾಹಿಸಬೇಕು ಎಂದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಇರುವ ಕರಪತ್ರಗಳನ್ನು ಕಾರ್ಯಕ್ರಮದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಬಿಡುಗಡೆಗೊಳಿಸಲಾಯಿತು.
ಗ್ರಾಮ ಆರೋಗ್ಯ ಅಭಿಯಾನದ ಅಡಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣ ಶಿಬಿರ, ವಿವಿಧ ಕೃಷಿ, ತೋಟಗಾರಿಕೆ, ಇಲಾಖೆಯ ಮಾಹಿತಿಯನ್ನು ನೀಡಿದರು. ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ನಿರೂಪಿಸಿದರು.

Related posts

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya
error: Content is protected !!