30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಸಿನೆಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸುಭಾಷ್ ಅರ್ವ ಸ್ವೀಕರಿಸಿ,ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಕೆಂಡಸಂಪಿಗೆ ಧಾರಾವಾಹಿಗೆ ನಿರ್ದೇಶನ ಮಾಡಿ ಅನುಬಂಧ ಆವಾರ್ಡ್ ಪ್ರಶಸ್ತಿಯನ್ನು ಪಡೆದು ತನ್ನ ಸಾಧನೆ ಹಾಗೂ ಊರಿನ ಘನತೆಯನ್ನು ಇಡೀ ಕರ್ನಾಟಕಕ್ಕೆ ಪರಿಚಯ ಮಾಡಿದ್ದಾರೆ.

ಸುಭಾಷ್ ಅರುವರವರು 2008ರಲ್ಲಿ ತನ್ನ ವಿದ್ಯಾಭ್ಯಾಸವನ್ನು ಬೆಳ್ತಂಗಡಿಯಲ್ಲಿ ಪೂರ್ಣಗೊಳಿಸಿ ಕಲಾವಿದನಾಗಬೇಕೆಂದು ಕಲಾ ರಂಗವನ್ನು ಬೆಂಗಳೂರಿನಲ್ಲಿ ಸೇರುತ್ತಾರೆ.ಸತತ ಪರಿಶ್ರಮದ ಫಲವೇ ಈ ಕಲರ್ಸ್ ಕನ್ನಡ ಅನುಬಂಧ ಬೆಸ್ಟ್ ಡೈರೆಕ್ಟರ್ ಅವಾರ್ಡ್. ಇವರು ವಿನು ಬಳಂಜ ಅವರ ಗರಡಿಯಲ್ಲಿ ಪಲಗಿ ಸಹನಿರ್ದೇಶಕನಾಗಿ,ಸಹಾಯಕ ನಿರ್ದೇಶಕನಾಗಿ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ‌.ಇವರ ನಿರ್ದೇಶನದಲ್ಲಿ ಮೂಡಿಬಂದ ಎಲ್ಲಾ ಸೀರಿಯಲ್ ಗಳು ಸೂಪರ್ ಡೂಪರ್ ಹಿಟ್ ಅಗಿದೆ. ಅದರಲ್ಲಿ ಮಂಗಳ ಗೌರಿ, ರಂಗನಾಯಕಿ, ಗೀತಾ, ಪ್ರಸ್ತುತ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಸೀರಿಯಲ್ ಕೆಂಡಸಂಪಿಗೆ.

ಹಿರಿತೆರೆಯ ಬೇರ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿಯಾಗಿದ್ದು,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣರವರ ಸಹೋದರ.

Related posts

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya
error: Content is protected !!