April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಸಿನೆಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸುಭಾಷ್ ಅರ್ವ ಸ್ವೀಕರಿಸಿ,ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಕೆಂಡಸಂಪಿಗೆ ಧಾರಾವಾಹಿಗೆ ನಿರ್ದೇಶನ ಮಾಡಿ ಅನುಬಂಧ ಆವಾರ್ಡ್ ಪ್ರಶಸ್ತಿಯನ್ನು ಪಡೆದು ತನ್ನ ಸಾಧನೆ ಹಾಗೂ ಊರಿನ ಘನತೆಯನ್ನು ಇಡೀ ಕರ್ನಾಟಕಕ್ಕೆ ಪರಿಚಯ ಮಾಡಿದ್ದಾರೆ.

ಸುಭಾಷ್ ಅರುವರವರು 2008ರಲ್ಲಿ ತನ್ನ ವಿದ್ಯಾಭ್ಯಾಸವನ್ನು ಬೆಳ್ತಂಗಡಿಯಲ್ಲಿ ಪೂರ್ಣಗೊಳಿಸಿ ಕಲಾವಿದನಾಗಬೇಕೆಂದು ಕಲಾ ರಂಗವನ್ನು ಬೆಂಗಳೂರಿನಲ್ಲಿ ಸೇರುತ್ತಾರೆ.ಸತತ ಪರಿಶ್ರಮದ ಫಲವೇ ಈ ಕಲರ್ಸ್ ಕನ್ನಡ ಅನುಬಂಧ ಬೆಸ್ಟ್ ಡೈರೆಕ್ಟರ್ ಅವಾರ್ಡ್. ಇವರು ವಿನು ಬಳಂಜ ಅವರ ಗರಡಿಯಲ್ಲಿ ಪಲಗಿ ಸಹನಿರ್ದೇಶಕನಾಗಿ,ಸಹಾಯಕ ನಿರ್ದೇಶಕನಾಗಿ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ‌.ಇವರ ನಿರ್ದೇಶನದಲ್ಲಿ ಮೂಡಿಬಂದ ಎಲ್ಲಾ ಸೀರಿಯಲ್ ಗಳು ಸೂಪರ್ ಡೂಪರ್ ಹಿಟ್ ಅಗಿದೆ. ಅದರಲ್ಲಿ ಮಂಗಳ ಗೌರಿ, ರಂಗನಾಯಕಿ, ಗೀತಾ, ಪ್ರಸ್ತುತ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಸೀರಿಯಲ್ ಕೆಂಡಸಂಪಿಗೆ.

ಹಿರಿತೆರೆಯ ಬೇರ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿಯಾಗಿದ್ದು,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣರವರ ಸಹೋದರ.

Related posts

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya
error: Content is protected !!