July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಸಿನೆಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸುಭಾಷ್ ಅರ್ವ ಸ್ವೀಕರಿಸಿ,ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಕೆಂಡಸಂಪಿಗೆ ಧಾರಾವಾಹಿಗೆ ನಿರ್ದೇಶನ ಮಾಡಿ ಅನುಬಂಧ ಆವಾರ್ಡ್ ಪ್ರಶಸ್ತಿಯನ್ನು ಪಡೆದು ತನ್ನ ಸಾಧನೆ ಹಾಗೂ ಊರಿನ ಘನತೆಯನ್ನು ಇಡೀ ಕರ್ನಾಟಕಕ್ಕೆ ಪರಿಚಯ ಮಾಡಿದ್ದಾರೆ.

ಸುಭಾಷ್ ಅರುವರವರು 2008ರಲ್ಲಿ ತನ್ನ ವಿದ್ಯಾಭ್ಯಾಸವನ್ನು ಬೆಳ್ತಂಗಡಿಯಲ್ಲಿ ಪೂರ್ಣಗೊಳಿಸಿ ಕಲಾವಿದನಾಗಬೇಕೆಂದು ಕಲಾ ರಂಗವನ್ನು ಬೆಂಗಳೂರಿನಲ್ಲಿ ಸೇರುತ್ತಾರೆ.ಸತತ ಪರಿಶ್ರಮದ ಫಲವೇ ಈ ಕಲರ್ಸ್ ಕನ್ನಡ ಅನುಬಂಧ ಬೆಸ್ಟ್ ಡೈರೆಕ್ಟರ್ ಅವಾರ್ಡ್. ಇವರು ವಿನು ಬಳಂಜ ಅವರ ಗರಡಿಯಲ್ಲಿ ಪಲಗಿ ಸಹನಿರ್ದೇಶಕನಾಗಿ,ಸಹಾಯಕ ನಿರ್ದೇಶಕನಾಗಿ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ‌.ಇವರ ನಿರ್ದೇಶನದಲ್ಲಿ ಮೂಡಿಬಂದ ಎಲ್ಲಾ ಸೀರಿಯಲ್ ಗಳು ಸೂಪರ್ ಡೂಪರ್ ಹಿಟ್ ಅಗಿದೆ. ಅದರಲ್ಲಿ ಮಂಗಳ ಗೌರಿ, ರಂಗನಾಯಕಿ, ಗೀತಾ, ಪ್ರಸ್ತುತ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಸೀರಿಯಲ್ ಕೆಂಡಸಂಪಿಗೆ.

ಹಿರಿತೆರೆಯ ಬೇರ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿಯಾಗಿದ್ದು,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣರವರ ಸಹೋದರ.

Related posts

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya
error: Content is protected !!