25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬಗಳಿಗೆ ವೈಲ್ಡ್ ಲೈಫ್ ಕನ್ಸರ್ವೇಶನ್ ಸೊಸೈಟಿ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಶ್ರೀ ರಾಮಚಂದ್ರ ಭಟ್, ಕುಕ್ಕುಜೆ ಕ್ಷೇತ್ರಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕೃಷಿ ಉಪಕರಣಗಳ ವಿತರಣಾ ಕಾರ್ಯಕ್ರಮ ಸೆ.25 ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಉಡುಪಿ ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ 96 ಫಲಾನುಭವಿಗಳಿಗೆ ಡಬ್ಲ್ಯೂ ಸಿ ಎಸ್ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಅಡಿಕೆಗೆ ಔಷಧ ಸಿಂಪಡಣೆ ಯಂತ್ರ 8 ಜನರಿಗೆ, ಅಡಿಕೆ ಮರ ಹತ್ತುವ ಯಂತ್ರ 4 ಜನರಿಗೆ, ಅಲ್ಯುಮಿನಿಯಂ ಏಣಿ 10 ಜನರಿಗೆ, ಕೈಗಾಡಿ 5 ಜನರಿಗೆ, ಸೋಲಾರ್ ಟರ್ಪಲ್ 5 ಜನರಿಗೆ, 5,000 ಅಡಿಕೆ ಸಸಿ, 200 ತೆಂಗಿನ ಸಸಿ, 200 ಕೊಕ್ಕೋ, 20 ಜನ ಫಲಾನುಭವಿಗಳಿಗೆ ತಲಾ 50 ರಂತೆ ಮಲ್ಲಿಗೆ ಗಿಡ, 25 ಜನರಿಗೆ ಡ್ರೈವಿಂಗ್ ತರಬೇತಿ ಮತ್ತು ಲೈಸೆನ್ಸ್ ಪತ್ರ, ಕುತ್ಲೂರು ಶ್ರೀದೇವಿ ಕೃಪಾದಲ್ಲಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ರಾಮಚಂದ್ರ ಭಟ್ ಕುಕ್ಕುಜೆ, ಯೋಜನೆಗಳ ಬಗ್ಗೆ ತಿಳಿಸಿ ಸ್ವಾಗತಿಸಿದರು. ಉಪಕರಣಗಳನ್ನು ವಿತರಿಸಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಡಬ್ಲ್ಯೂ ಸಿ ಎಸ್ ಸಂಸ್ಥೆಗೆ ಅಭಿನಂದಿಸಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿ ಕೃಷಿ ಉಪಕರಣಗಳನ್ನು ಸದುಪಯೋಗ ಮಾಡಿ ಕೃಷಿಯಲ್ಲಿ ಮುಂದುವರಿಯಬೇಕೆಂದು ತಿಳಿಸಿದರು.

ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ ಸಂಸ್ಥೆಯ ಕಾರ್ಯಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವೇಣೂರು ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ನಿರಂಜನ್, ಪ್ರಗತಿಪರ ಕೃಷಿಕರಾದ ಮುನಿರಾಜ್ ಜೈನ್, ಅಭಿಜಿತ್, ಸಂಸ್ಥೆಯ ರವಿ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಡಬ್ಲ್ಯೂ.ಸಿ.ಎಸ್ ಸಂಸ್ಥೆಯನ್ನು ಫಲನುಭವಿಗಳಾದ ದೇವಪ್ಪ ಮಲೆಕುಡಿಯ ನೂರಾಳ್ ಬೆಟ್ಟು, ಶ್ರೀಮತಿ ಅಮಿತ ನಾಯ್ಕ ಕುತ್ಲೂರು ಅಭಿನಂದಿಸಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಧರ್ಣಪ್ಪ ಧನ್ಯವಾದವಿತ್ತರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya
error: Content is protected !!