September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬಗಳಿಗೆ ವೈಲ್ಡ್ ಲೈಫ್ ಕನ್ಸರ್ವೇಶನ್ ಸೊಸೈಟಿ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಶ್ರೀ ರಾಮಚಂದ್ರ ಭಟ್, ಕುಕ್ಕುಜೆ ಕ್ಷೇತ್ರಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕೃಷಿ ಉಪಕರಣಗಳ ವಿತರಣಾ ಕಾರ್ಯಕ್ರಮ ಸೆ.25 ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಉಡುಪಿ ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ 96 ಫಲಾನುಭವಿಗಳಿಗೆ ಡಬ್ಲ್ಯೂ ಸಿ ಎಸ್ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಅಡಿಕೆಗೆ ಔಷಧ ಸಿಂಪಡಣೆ ಯಂತ್ರ 8 ಜನರಿಗೆ, ಅಡಿಕೆ ಮರ ಹತ್ತುವ ಯಂತ್ರ 4 ಜನರಿಗೆ, ಅಲ್ಯುಮಿನಿಯಂ ಏಣಿ 10 ಜನರಿಗೆ, ಕೈಗಾಡಿ 5 ಜನರಿಗೆ, ಸೋಲಾರ್ ಟರ್ಪಲ್ 5 ಜನರಿಗೆ, 5,000 ಅಡಿಕೆ ಸಸಿ, 200 ತೆಂಗಿನ ಸಸಿ, 200 ಕೊಕ್ಕೋ, 20 ಜನ ಫಲಾನುಭವಿಗಳಿಗೆ ತಲಾ 50 ರಂತೆ ಮಲ್ಲಿಗೆ ಗಿಡ, 25 ಜನರಿಗೆ ಡ್ರೈವಿಂಗ್ ತರಬೇತಿ ಮತ್ತು ಲೈಸೆನ್ಸ್ ಪತ್ರ, ಕುತ್ಲೂರು ಶ್ರೀದೇವಿ ಕೃಪಾದಲ್ಲಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ರಾಮಚಂದ್ರ ಭಟ್ ಕುಕ್ಕುಜೆ, ಯೋಜನೆಗಳ ಬಗ್ಗೆ ತಿಳಿಸಿ ಸ್ವಾಗತಿಸಿದರು. ಉಪಕರಣಗಳನ್ನು ವಿತರಿಸಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಡಬ್ಲ್ಯೂ ಸಿ ಎಸ್ ಸಂಸ್ಥೆಗೆ ಅಭಿನಂದಿಸಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿ ಕೃಷಿ ಉಪಕರಣಗಳನ್ನು ಸದುಪಯೋಗ ಮಾಡಿ ಕೃಷಿಯಲ್ಲಿ ಮುಂದುವರಿಯಬೇಕೆಂದು ತಿಳಿಸಿದರು.

ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ ಸಂಸ್ಥೆಯ ಕಾರ್ಯಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವೇಣೂರು ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ನಿರಂಜನ್, ಪ್ರಗತಿಪರ ಕೃಷಿಕರಾದ ಮುನಿರಾಜ್ ಜೈನ್, ಅಭಿಜಿತ್, ಸಂಸ್ಥೆಯ ರವಿ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಡಬ್ಲ್ಯೂ.ಸಿ.ಎಸ್ ಸಂಸ್ಥೆಯನ್ನು ಫಲನುಭವಿಗಳಾದ ದೇವಪ್ಪ ಮಲೆಕುಡಿಯ ನೂರಾಳ್ ಬೆಟ್ಟು, ಶ್ರೀಮತಿ ಅಮಿತ ನಾಯ್ಕ ಕುತ್ಲೂರು ಅಭಿನಂದಿಸಿದರು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಧರ್ಣಪ್ಪ ಧನ್ಯವಾದವಿತ್ತರು.

Related posts

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!