23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya
error: Content is protected !!