22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya
error: Content is protected !!