July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯುತ್ತಿರುವ ವಜ್ರಾಭರಣಗಳ ಪ್ರದರ್ಶನ-ಮಾರಾಟ ಮೇಳ ‘ಡೈಮಂಡ್ ಫೆಸ್ಟ್’ಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆಗಳು ದೊರೆತಿವೆ. ಸೆಪ್ಟೆಂಬರ್ ೧೮ರಂದು ಪ್ರಾರಂಭವಾದ ಡೈಮಂಡ್ ಫೆಸ್ಟ್‌ಗೆ ಈಗಾಗಲೇ ಭಾರೀ ಸಂಖ್ಯೆಯ ಗ್ರಾಹಕರು ಆಗಮಿಸಿದ್ದು, ತಮ್ಮ ಆಯ್ಕೆಯ ವಜ್ರಾಭರಣಗಳನ್ನು ಖರೀದಿಸಿ ಸಂತಸಪಟ್ಟಿದ್ದಾರೆ.
ಡೈಮಂಡ್ ಫೆಸ್ಟ್ ಆರಂಭವಾದ ದಿನದಿಂದಲೇ ಗ್ರಾಹಕರು ದೊಡ್ಡ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡಿ, ತಮಗಿಷ್ಟವಾದ ವಜ್ರಾಭರಣಗಳನ್ನು ಖರೀದಿಸುತ್ತಿದ್ದಾರೆ. ಗ್ರಾಹಕರ ಬೇಡಿಕೆಯ ಮೇರೆಗೆ ಡೈಮಂಡ್ ಫೆಸ್ಟ್ ಇನ್ನಷ್ಟು ದಿನಗಳ ಕಾಲ ವಿಸ್ತರಣೆಯಾಗುವ ನಿರೀಕ್ಷೆಯಿದೆ.
ಕೈಗೆಟುಕುವ ದರದಲ್ಲಿ ಮಹಿಳೆಯರ ಮನಮೆಚ್ಚುವ ವಜ್ರದ ಆಭರಣಗಳ ಖರೀದಿಗೆ ಮುಳಿಯ ಸಂಸ್ಥೆ ಅವಕಾಶ ಒದಗಿಸಿದೆ. ಆಕರ್ಷಕ ದರದಲ್ಲಿ ವಜ್ರದ ಆಭರಣಗಳನ್ನು ಖರೀದಿಸಬಹುದಾಗಿದೆ. ವೇದಾಂತ್ ಮತ್ತು ಕಿಸ್ನ ಎಂಬ ಎರಡು ಶ್ರೇಣಿಯ ಆಭರಣಗಳು ಡೈಮಂಡ್ ಫೆಸ್ಟ್‌ನಲ್ಲಿ ಲಭ್ಯವಿವೆ.

ವಜ್ರದ ಉಂಗುರ ಗೆಲ್ಲುವ ಅವಕಾಶ:
ಡೈಮಂಡ್ ಫೆಸ್ಟ್ ಮಾರಾಟ ಮತ್ತು ಪ್ರದರ್ಶನದಲ್ಲಿ ವಜ್ರಾಭರಣಗಳ ಅಮೋಘ ಸಂಗ್ರಹವಿದೆ. ವೇದಾಂತ್ ಎನ್ನುವ ವಜ್ರದ ಆಭರಣಗಳು, ಅಮೂಲ್ಯ ಡೈಮಂಡ್ ಹಾಗೂ ಕಿಸ್ನ ಡೈಮಂಡ್‌ಗಳು ಲಭ್ಯವಿದೆ. ಉಂಗುರಗಳು, ನೆಕ್ಲೇಸ್‌ಗಳು, ಕಿವಿಯೋಲೆಗಳನ್ನು ಅತ್ಯಲ್ಪ ಗ್ರಾಹಕ ಸ್ನೇಹಿ ದರದಲ್ಲಿ ಪಡೆದುಕೊಳ್ಳಬಹುದು. ಖರೀದಿಯಲ್ಲಿ ವಜ್ರದ ಉಂಗುರ ಗೆಲ್ಲುವ ಅವಕಾಶ ಗ್ರಾಹಕರಿಗೆ ಲಭ್ಯವಿದೆ. ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ ವಜ್ರಾಭರಣಗಳೊಂದಿಗೆ ವಿನಿಮಯ ಮಾಡಿ100 ರೂ. ಅಧಿಕ ಪಡೆಯಬಹುದಾಗಿದೆ.

ಕೈಗೆಟಕುವ ವೈಭವ:
ಮುಳಿಯ ಜುವೆಲ್ಸ್‌ನಲ್ಲಿ ವಜ್ರಾಭರಣಗಳ ಕೈಗೆಟಕುವ ದರದಲ್ಲಿ ದೊರೆಯುತ್ತದೆ. 3700 ರಿಂದ 15 ಲಕ್ಷದವರೆಗಿನ ಆಭರಣಗಳು ಲಭ್ಯವಿದೆ. ಇದರಲ್ಲಿ ಉಂಗುರಗಳು 47೦೦/-, ನೆಕ್ಲೇಸ್‌ಗಳು 48400/-, ಪೆಂಡೆಂಟ್‌ಗಳು 3700/-, ಕಿವಿಯೋಲೆ 5300/-, ಬಳೆಗಳು 28500/- ರಿಂದ ಪ್ರಾರಂಭವಾಗಲಿದೆ.

Related posts

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!