September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

Related posts

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya
error: Content is protected !!