23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya
error: Content is protected !!