September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮ ಮಂಗಳೂರು ಶಾಖೆ 1 ರ ಸೀನಿಯರ್ ಬ್ಯುಸಿನೆಸ್ ಅಸೋಸಿಯೇಟ್ ಕೃಷ್ಣ ಎಂ ಹೆಗಡೆಯವರ ಯೂನಿಟಿನ ಪ್ರತಿನಿಧಿಯಾಗಿರುವ ನಿತ್ಯಾನಂದ ನಾವರ ಇವರು ಒಂದೇ ದಿನದಲ್ಲಿ 112 ಜೀವ ವಿಮಾ ಪಾಲಿಸಿಗಳನ್ನುಮಾಡಿ ಒನ್ ಡೇ ಸೆಂಚುರಿಯನ್ ಎಂಬ ಸಾಧನೆಯನ್ನು ಈ ಆರ್ಥಿಕ ವರ್ಷದಲ್ಲಿ ಉಡುಪಿ ವಿಭಾಗದಲ್ಲೇ ಪ್ರಥಮವಾಗಿ ಮಾಡಿರುತ್ತಾರೆ.

ಇವರು ಉಜಿರೆಯಲ್ಲಿ ಎನ್ ಎನ್ ಬಾಟಲಿಂಗ್ ಕಂಪನಿ ಉದ್ಯಮವನ್ನು ನಡೆಸುತ್ತಿದ್ದು, ಬೆಳ್ತಂಗಡಿ ಲಯನ್ಸ್ ಕ್ಲಬ್ ಮಾಜಿ ಪ್ರಾಂತ್ಯ ಅಧ್ಯಕ್ಷರಾಗಿದ್ದು, ಪ್ರಸ್ತುತ ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಡಾಕ್ಟರ್ ಮೇಲ್ವಿನ್ ಡಿಸೋಜಾ ರವರ ಸಂಪುಟದಲ್ಲಿ ಜಿಎಸ್‌ಟಿ ಸಹ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಲ.ನಿತ್ಯಾನಂದ ನಾವರರವರು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ನಾರಾವಿ ವಲಯದ ಅಧ್ಯಕ್ಷರಾಗಿ, ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಕೋಶಾಧಿಕಾರಿಯಾಗಿ,ಯುವವಾಹಿನಿ ಬೆಳ್ತಂಗಡಿ ಘಟಕ ಇದರ ಗೌರವ ಸಲಹೆಗಾರರಾಗಿ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾರೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!