30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
error: Content is protected !!