September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya
error: Content is protected !!