25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya
error: Content is protected !!