25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

ಧರ್ಮಸ್ಥಳ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಚಾಲನೆ ನೀಡಿದರು.

ಅಭಿಯಾನದ ಮಾದರಿಯಲ್ಲಿ ಸಮುದಾಯಕ್ಕೆ ಆರೋಗ್ಯ ಸೇವೆಯನ್ನು ಸಂಪೂರ್ಣವಾಗಿ ತಲುಪುವ ಬಗ್ಗೆ ಈ ಸೇವೆಯನ್ನು ಮಾಡಲಾಗಿದೆ. ಧರ್ಮಸ್ಥಳ ಗ್ರಾಮದ ಎಲ್ಲಾ ವಾರ್ಡ್ ಗಳಲ್ಲಿ ಎಲ್ಲಾ ಕುಟುಂಬಗಳಿಗೆ, ಅಂಗನವಾಡಿ, ಶಾಲೆ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಗ್ರಾಮದ ಆರೋಗ್ಯ ಸೇವೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವಂತಹ ವೈದ್ಯರು ಸಿಬ್ಬಂದಿ ವರ್ಗ ಅವರಿಗೆ ಪಂಚಾಯತಿ ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಅಧ್ಯಕ್ಷರಾದ , ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರರಾವ್, ವಸಂತ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ,ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಕನ್ಯಾಡಿ ಆರೋಗ್ಯ ಉಪ ಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಶ್ರೀಮತಿ ಆನ್ಸಿ ಮೇರಿ, ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಅಧಿಕಾರಿ ಡಾ. ಮಂಜು, ಹಿರಿಯ ಅರೋಗ್ಯ ಸಹಾಯಕಿ ಶ್ರೀಮತಿ ಸೀತಮ್ಮ, ಸಾಕೇತ ಮ್ಯಾನೇಜರ್ ಶ್ರೀಧರ ಶೆಟ್ಟಿ,ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!