September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

ಧರ್ಮಸ್ಥಳ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಚಾಲನೆ ನೀಡಿದರು.

ಅಭಿಯಾನದ ಮಾದರಿಯಲ್ಲಿ ಸಮುದಾಯಕ್ಕೆ ಆರೋಗ್ಯ ಸೇವೆಯನ್ನು ಸಂಪೂರ್ಣವಾಗಿ ತಲುಪುವ ಬಗ್ಗೆ ಈ ಸೇವೆಯನ್ನು ಮಾಡಲಾಗಿದೆ. ಧರ್ಮಸ್ಥಳ ಗ್ರಾಮದ ಎಲ್ಲಾ ವಾರ್ಡ್ ಗಳಲ್ಲಿ ಎಲ್ಲಾ ಕುಟುಂಬಗಳಿಗೆ, ಅಂಗನವಾಡಿ, ಶಾಲೆ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಗ್ರಾಮದ ಆರೋಗ್ಯ ಸೇವೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವಂತಹ ವೈದ್ಯರು ಸಿಬ್ಬಂದಿ ವರ್ಗ ಅವರಿಗೆ ಪಂಚಾಯತಿ ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಅಧ್ಯಕ್ಷರಾದ , ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರರಾವ್, ವಸಂತ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ,ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಕನ್ಯಾಡಿ ಆರೋಗ್ಯ ಉಪ ಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಶ್ರೀಮತಿ ಆನ್ಸಿ ಮೇರಿ, ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಅಧಿಕಾರಿ ಡಾ. ಮಂಜು, ಹಿರಿಯ ಅರೋಗ್ಯ ಸಹಾಯಕಿ ಶ್ರೀಮತಿ ಸೀತಮ್ಮ, ಸಾಕೇತ ಮ್ಯಾನೇಜರ್ ಶ್ರೀಧರ ಶೆಟ್ಟಿ,ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya
error: Content is protected !!