37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ತಂಗಡಿ : ಕೂಟ ಮಹಾ ಜಗತ್ತು ಸಾಲಿಗ್ರಾಮ (ರಿ), ಉಡುಪಿ ಜಿಲ್ಲೆ ಇದರ 70ನೇ ಕೇಂದ್ರೀಯ ಮಹಾಧಿವೇಶನ, ಕಾಸರಗೋಡಿನ ಕುಮಾರಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅದ್ದೂರಿಯಾಗಿ ಇತ್ತೀಚೆಗೆ ಜರುಗಿತು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ಕೂ. ಮ. ಜ. ಇದರ ಮಹಿಳಾವೇದಿಕೆಯ ಸದಸ್ಯೆಯರು ಸಾಂಸ್ಕೃತಿಕ ಕಾರ್ಯಕ್ರಮ ವನ್ನು ನೀಡಿದರು.

ಹಾದಿ ತಪ್ಪುತ್ತಿರುವ ಯುವ ಜನಾಂಗ, ತಮ್ಮ ಸಂಸ್ಕೃತಿಯ, ದೇಶದ ಅಸ್ಮಿತೆಯನ್ನು ಮರೆಯದೆ ಹೊಸತನವನ್ನು ಮೈಗೂಡಿಸಿಕೊಂಡು ಭಾರತವನ್ನು ವಿಶ್ವಗುರು ಮಾಡುವಲ್ಲಿ ತಮ್ಮ ಅಳಿಲುಸೇವೆ ನೀಡಬೇಕು ಎಂಬ ಸತ್ವವನ್ನು ಸಾರುವ ವಿದ್ಯಾಶ್ರೀ ಅಡೂರ್ ಅವರ ಪರಿಕಲ್ಪನೆಯ ವೈವಿಧ್ಯಪೂರ್ಣ ಕಾರ್ಯಕ್ರಮ ಇದಾಗಿದ್ದು ಸೂರ್ಯನಮಸ್ಕಾರ, ಕುಣಿತಭಜನೆ, ಜಾನಪದ ನೃತ್ಯ, ಇತ್ಯಾದಿಗಳನ್ನು ಒಳಗೊಂಡಿತ್ತು.


ಯೋಗಾಭ್ಯಾಸದಲ್ಲಿ ಶಿವಕಿರಣ ಹೊಳ್ಳ, ಸುಶಾಂತ್ ಹೊಳ್ಳ, ಕುಣಿತ ಭಜನೆಯಲ್ಲಿ ನಳಿನಿ ಹೊಳ್ಳ, ಸುಜಾತ ರಾವ್, ಲಕ್ಷ್ಮಿ ಹೊಳ್ಳ, ಧನಲಕ್ಷ್ಮಿಹೊಳ್ಳ, ಮಹಾಲಕ್ಷ್ಮಿ, ಗೀತಾ ರಾವ್, ಶಾಂತಲ ಕಾರಂತ್, ಸವಿತ ಹೊಳ್ಳ, ಜಾನಪದ ನೃತ್ಯದಲ್ಲಿ ವಿದ್ಯಾಶ್ರೀ ಅಡೂರ್. ಕವಿತಾ ಹೊಳ್ಳ, ಲಾವಣ್ಯ, ರಕ್ಷಿತಾ, ಆಶಾ, ಅಕ್ಷತಾ, ಸಂತೋಷಿನಿ ಮತ್ತು ರೂಪಕದಲ್ಲಿ ಅಂಜನಾ ಭಾಗವಹಿಸಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!