25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ತಂಗಡಿ : ಕೂಟ ಮಹಾ ಜಗತ್ತು ಸಾಲಿಗ್ರಾಮ (ರಿ), ಉಡುಪಿ ಜಿಲ್ಲೆ ಇದರ 70ನೇ ಕೇಂದ್ರೀಯ ಮಹಾಧಿವೇಶನ, ಕಾಸರಗೋಡಿನ ಕುಮಾರಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅದ್ದೂರಿಯಾಗಿ ಇತ್ತೀಚೆಗೆ ಜರುಗಿತು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ಕೂ. ಮ. ಜ. ಇದರ ಮಹಿಳಾವೇದಿಕೆಯ ಸದಸ್ಯೆಯರು ಸಾಂಸ್ಕೃತಿಕ ಕಾರ್ಯಕ್ರಮ ವನ್ನು ನೀಡಿದರು.

ಹಾದಿ ತಪ್ಪುತ್ತಿರುವ ಯುವ ಜನಾಂಗ, ತಮ್ಮ ಸಂಸ್ಕೃತಿಯ, ದೇಶದ ಅಸ್ಮಿತೆಯನ್ನು ಮರೆಯದೆ ಹೊಸತನವನ್ನು ಮೈಗೂಡಿಸಿಕೊಂಡು ಭಾರತವನ್ನು ವಿಶ್ವಗುರು ಮಾಡುವಲ್ಲಿ ತಮ್ಮ ಅಳಿಲುಸೇವೆ ನೀಡಬೇಕು ಎಂಬ ಸತ್ವವನ್ನು ಸಾರುವ ವಿದ್ಯಾಶ್ರೀ ಅಡೂರ್ ಅವರ ಪರಿಕಲ್ಪನೆಯ ವೈವಿಧ್ಯಪೂರ್ಣ ಕಾರ್ಯಕ್ರಮ ಇದಾಗಿದ್ದು ಸೂರ್ಯನಮಸ್ಕಾರ, ಕುಣಿತಭಜನೆ, ಜಾನಪದ ನೃತ್ಯ, ಇತ್ಯಾದಿಗಳನ್ನು ಒಳಗೊಂಡಿತ್ತು.


ಯೋಗಾಭ್ಯಾಸದಲ್ಲಿ ಶಿವಕಿರಣ ಹೊಳ್ಳ, ಸುಶಾಂತ್ ಹೊಳ್ಳ, ಕುಣಿತ ಭಜನೆಯಲ್ಲಿ ನಳಿನಿ ಹೊಳ್ಳ, ಸುಜಾತ ರಾವ್, ಲಕ್ಷ್ಮಿ ಹೊಳ್ಳ, ಧನಲಕ್ಷ್ಮಿಹೊಳ್ಳ, ಮಹಾಲಕ್ಷ್ಮಿ, ಗೀತಾ ರಾವ್, ಶಾಂತಲ ಕಾರಂತ್, ಸವಿತ ಹೊಳ್ಳ, ಜಾನಪದ ನೃತ್ಯದಲ್ಲಿ ವಿದ್ಯಾಶ್ರೀ ಅಡೂರ್. ಕವಿತಾ ಹೊಳ್ಳ, ಲಾವಣ್ಯ, ರಕ್ಷಿತಾ, ಆಶಾ, ಅಕ್ಷತಾ, ಸಂತೋಷಿನಿ ಮತ್ತು ರೂಪಕದಲ್ಲಿ ಅಂಜನಾ ಭಾಗವಹಿಸಿದ್ದರು.

Related posts

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya
error: Content is protected !!