22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya
error: Content is protected !!