25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸೆ. 24 ರಂದು ಉಳ್ತೂರು ಮಸೀದಿಯಲ್ಲಿ ಅನಾಥ ಹುಡುಗಿಯ ಉಚಿತ ವಿವಾಹ ಕಾರ್ಯಕ್ರಮ ಸಾಂಪ್ರದಾಯ ಬದ್ಧವಾಗಿ ನೆರವೇರಿತು.

ನಿಖಾಹ್ ಮತ್ತು ದುಆ ನೇತೃತ್ವವನ್ನು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಉಪಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ವಹಿಸಿದ್ದರು. ಉಳ್ತೂರು ಮುದರಿಸ್ ಮೌಲಾನಾ ಮುಹಮ್ಮದ್ ಫಾಳಿಲಿ ಅಲ್ ಕಾಮಿಲಿ ಮುಖ್ಯ ಪ್ರಭಾಷಣ ನಡೆಸಿದರು. ಸಿರಾಜುದ್ದೀನ್ ಝುಹ್ರಿ ಉಳ್ತೂರು, ಸಮಿತಿ ಅಧ್ಯಕ್ಷ ಬದ್ರುದ್ದೀನ್ ಲತೀಫಿ ಸೇರಿದಂತೆ ಹಲವು ಉಲಮಾ ಉಮರಾಗಳು ಊರ ಪರ ಊರಿನ ಗಣ್ಯರು ಭಾಗವಹಿಸಿದ್ದರು.
ಉಳ್ತೂರು ಜಮಾಅತ್ ಮಾಜಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸ್ವಾಗತಿಸಿದರು.
ಮಿನ್ಹಾಜ್ ಸಮಿತಿಯ ಚೇರ್ಮೆನ್ ಬದ್ರುದ್ದೀನ್ ಲತೀಫಿ ಪ್ರಸ್ತಾವನೆಗೈದರು. ಮುಂದೆಯೂ ಸಮಿತಿ ವತಿಯಿಂದ ಇಂತಹಾ ಜೀವ ಕಾರುಣ್ಯ ಕಾರ್ಯಕ್ರಮ ಗಳನ್ಮು ದಾನಿಗಳ ಸಹಕಾರದೊಂದಿಗೆ ನಡೆಸುವ ಬಗ್ಗೆ ಪಣ ತೊಡಲಾಯಿತು.

Related posts

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya
error: Content is protected !!