25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

ಉಜಿರೆ: ಧರ್ಮಸ್ಥಳದಲ್ಲಿ25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿದೆ.
ಗುರುವಾರ ಪೂರ್ವಾಹ್ನ 11 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.
ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.


ಸಮಾರೋಪ ಸಮಾರಂಭ: ಅಕ್ಟೋಬರ್ 4 ರಂದು ಬುಧವಾರ ಪೂರ್ವಾಹ್ನ ಹನ್ನೊಂದು ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಮತ್ತು ಚಲನಚಿತ್ರ ನಿರ್ದೇಶಕ ಇಳೈಯರಾಜ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಹುಬ್ಬಳ್ಳಿ ಮೂರು ಸಾವಿರ ಮಠದ ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಆಶೀರ್ವಚನ ನೀಡುವರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಶಾಸಕರುಗಳಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು.
ಬುಧವಾರ ಬೆಳಿಗ್ಗೆ ಒಂಭತ್ತು ಗಂಟೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆಯ್ದ ಭಜನಾ ಮಂಡಳಿಗಳ ಮುನ್ನೂರು ಭಜನಾ ತಂಡಗಳ ಐದು ಸಾವಿರ ಭಜನಾಪಟುಗಳಿಂದ ಶೋಭಾಯಾತ್ರೆ ಹಾಗೂ ನೃತ್ಯ ಭಜನೆ ನಡೆಯಲಿದೆ.
ಭಜನಾ ತರಬೇತಿ ಕಮ್ಮಟದ ಸಂದರ್ಭ ಪ್ರತಿದಿನ ಸಂಜೆ ಗಂಟೆ 5.30 ರಿಂದ ಶಿಬಿರಾರ್ಥಿಗಳಿಂದ ನಗರ ಭಜನೆ ಕಾರ್ಯಕ್ರಮವಿದೆ.
ಪ್ರತಿದಿನ ರಾತ್ರಿ ಗಂಟೆ 7.30 ರಿಂದ ಸಾಂಸ್ಕಂತ್ರಿಕ ಕಾರ್ಯಕ್ರಮಗಳಿವೆ.


ಸಂಪನ್ಮೂಲ ವ್ಯಕ್ತಿಗಳು: ಕಾರ್ಯಾಗಾರದಲ್ಲಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್‌ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.

Related posts

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!