25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

ಬೆಳ್ತಂಗಡಿ: ದಕ ಜಿಲ್ಲಾಡಳಿತ, ದಕಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ ಬೆಳ್ತಂಗಡಿ, ಗ್ರಾಪಂ ಉಜಿರೆ, ಶಾಲಾ ಶಿಕ್ಷಣ ಇಲಾಖೆ,ಎಸ್ ಡಿಎಂ ಸ್ವಾಯತ್ತ ಕಾಲೇಜು ಉಜಿರೆ, ಯುವಜನ ಒಕ್ಕೂಟ,ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ದಸರಾ ಕ್ರೀಡಾಕೂಟವು ಉಜಿರೆಯ ಎಸ್ ಡಿಎಂ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸೆ.28 ರಂದು ಜರಗಿತು.


ಕ್ರೀಡಾಕೂಟವನ್ನು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿ ಮಾತನಾಡಿ “ಇತ್ತೀಚಿನ ವರ್ಷಗಳಲ್ಲಿ ಒಲಂಪಿಕ್ಸ್ ಸೇರಿದಂತೆ ವಿಶ್ವದ ಕ್ರೀಡಾಕೂಟಗಳಲ್ಲಿ ಭಾರತವು ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಚಾರ. ಭಾರತವು ಸಾಮಾಜಿಕವಾಗಿ ಆರ್ಥಿಕ ವಾಗಿ ಪ್ರಬಲ ರಾಷ್ಟ್ರ ಎಂದು ಗುರುತಿಸಲ್ಪಟ್ಟಿದ್ದು ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ ಎಂದರು.


ಉಜಿರೆ ಗ್ರಾಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ ಅಧ್ಯಕ್ಷತೆ ವಹಿಸಿ ಮಾತನಾಡಿ “ಇಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಶ್ಲಾಘನೀಯ ಯುವಜನರ ಸಾಧನೆ, ಪ್ರತಿಭಾ ಪ್ರೋತ್ಸಾಹಕ್ಕೆ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ಅವಕಾಶಗಳನ್ನು ಬಳಸಿಕೊಂಡು ಮುನ್ನಡೆದರೆ ಯಶಸ್ಸು ಸಾಧ್ಯ” ಎಂದರು.


ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಸುಜಯಾ,ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಬಿ., ಎಸ್.ಡಿ.ಎಂನ ಕ್ರೀಡಾ ಕಾರ್ಯದರ್ಶಿ ರಮೇಶ್, ರವಿ ವೈ.ನಾಯಕ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ರಾವ್,ತಾಲೂಕು ಯುವಜನ ಒಕ್ಕೂಟದ ನಿರ್ದೇಶಕ ಚಿದಾನಂದ ಇಡ್ಯಾ, ತಾಲೂಕು ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.


ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಸಂಚಾಲಕ ನಾಮದೇವ್ ರಾವ್ ನಿರೂಪಿಸಿದರು. ಸಂಯೋಜಕ ಸಾಂತಪ್ಪ ಕಲ್ಮಂಜ ಸ್ವಾಗತಿಸಿದರು. ಶಿಕ್ಷಕ ಶೀನಪ್ಪ ಗೌಡ ವಂದಿಸಿದರು.

Related posts

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
error: Content is protected !!