23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕುರಿತು ಅಂಗಡಿ/ ಹೋಟೆಲ್/ ವ್ಯಾಪಾರಸ್ಥರು/ ಸಂಘ ಸಂಸ್ಥೆಗಳಿಗೆ ಮತ್ತು ಶ್ರೀ ಕ್ಷೇತ್ರದ ಅಧಿಕಾರಿ/ ನೌಕರರಿಗೆ ಮಾಹಿತಿ ಕಾರ್ಯಗಾರ ಸೆ.27 ರಂದು ನಡೆಯಿತು.

ಕಾರ್ಯಗಾರದಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಎಲ್ಲಾ ಅಂಗಡಿ ಹೋಟೆಲ್ ಮಾಲಕರು ಶ್ರೀ ಕ್ಷೇತ್ರದ ನೌಕರರ ವರ್ಗ ಸಂಘ ಸಂಸ್ಥೆಗಳು ಉಪಸ್ಥಿತರಿದ್ದರು. ಕಾರ್ಯಾಗಾರವನ್ನು ಕುಸುಮಾಧರ ಕಾರ್ಯನಿರ್ವಹಣಾಧಿಕಾರಿಯವರು ತಾಲೂಕು ಪಂಚಾಯಿತಿ ಬೆಳ್ತಂಗಡಿ ಇವರು ಚಾಲನೆ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಮಹತ್ವ ಮತ್ತು ಸ್ವಚ್ಛತೆಯ ಬಗ್ಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ನಾಗರಾಜ್ ಆರ್ ಅಂಚನ್ ಹಸಿರು ದಳ ಮಂಗಳೂರು , ಡೊoಬಯ್ಯ ಜಿಲ್ಲಾ ಸಂಯೋಜಕರು ಸ್ವಚ್ಛ ಭಾರತ ಮಿಷನ್ ದ. ಕ ಜಿ. ಪ ಮಂಗಳೂರು ಇವರು ಭಾಗವಹಿಸಿದರು . ಪ್ರಶ್ನೋತ್ತರ ಕಾರ್ಯಕ್ರಮ ಏಕಬಳಕೆಯ ಪ್ಲಾಸ್ಟಿಕ್ ನ ಬಗ್ಗೆ ಪರ್ಯಾಯ ಮಾರ್ಗೋಪಾಯವನ್ನು ತಿಳಿಸಿದರು. ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!